23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

ಇಂದು ಬೆಟ್ಟು: ಇಂದಬೆಟ್ಟು ಗ್ರಾಮದ ವಾರ್ಡ್ 3 ರಲ್ಲಿ ಪೇರದ್ದಪಲ್ಕೆ ಹಾನಿಬೆಟ್ಟು ತಿರುವಿನ ಪ್ರದೇಶದ ಸರ್ವೇ ನಂಬರ್ 234ರಲ್ಲಿ ಬೆಳ್ತಂಗಡಿ ತಹಶೀಲ್ದಾರ್ ರವರ ಆದೇಶ ಸಂಖ್ಯೆ NCRCR 181/2023.24 ರಂತೆ ಸರ್ಕಾರದ ಸ್ವಾಧೀನಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರ ನೇತೃತ್ವದಲ್ಲಿ ಪಡೆಯಲಾಯಿತು.
ಈ ಕಾರ್ಯಾಚರಣೆಯಲ್ಲಿ ಇಂದಬೆಟ್ಟು, ನಾವೂರು, ಕನ್ಯಾಡಿ, ಕಡಿರುಧ್ಯವರ, ಮಿತ್ತಬಾಗಿಲು, ಮಲವಂತಿಗೆ, ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಅಧಿಕಾರಿಗಳಿಗೆ ಸಹಕರಿಸಿದರು. ಬೆಳ್ತಂಗಡಿ ಮನೆಗಾರ್, ಇಂದಬೆಟ್ಟು ವಿ.ಎ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲಿಸ್ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಈ ಸ್ವಾಧೀನ ಪ್ರಕ್ರಿಯೆ ಬಗ್ಗೆ ಪ್ರತಿಕ್ರಿಯೆ ನೀಡಿದ

ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಅನಂದ ಅಡಿಲು ಹಲವು ದಶಕಗಳಿಂದ ಬೇಡಿಕೆ ಇರುವ ಹಾಗೂ ಇದರ ಬಗ್ಗೆ ನಿರಂತರವಾಗಿ ಸಾರ್ವಜನಿಕರು ಹಲವು ವರ್ಷಗಳಿಂದ ಗ್ರಾಮ ಸಭೆಗಳಲ್ಲಿ ಹೋರಾಟ ಮಾಡುತ್ತಿದ್ದು ಈ ಭಾಗದಲ್ಲಿ ಮೆಸ್ಕಾಂ ಇಲಾಖೆಯಿಂದ Sub-station ಸಬ್ ಸ್ಟೇಷನ್ ನಿರ್ಮಾಣ ಆಗುವ ಉದ್ದೇಶದಿಂದ ಸರ್ವೇ ನಂಬರ್ 234 */ ರಲ್ಲಿ ಸೂಕ್ತ ಸ್ಥಳವೆಂದು ಗ್ರಾಮ ಸಭೆಗಳಲ್ಲಿ ಗ್ರಾಮಸ್ಥರ ಆಗ್ರಹದಂತೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಂಡು ಮಾನ್ಯ ತಹಶೀಲ್ದಾರ ಮೂಲಕ ಈ ಪ್ರಕ್ರಿಯೆ ನಡೆದು ಇಂದು ಸ್ವಾಧೀನ ಪ್ರಕ್ರಿಯೆ ನಡೆದಿರುವುದು ಇದು ಸಮಸ್ತ ಗ್ರಾಮಸ್ಥರ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ, ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಮತ್ತು ಸಹಕಾರ ನೀಡಿದ ಸಮಸ್ತರಿಗೂ ವಂದನೆಗಳು ಸಲ್ಲಿಸುತ್ತಾ ಮುಂದೆಯೂ ಅಧಿಕಾರಿಗಳಿಗೆ ಸಮಸ್ತ ಗ್ರಾಮಸ್ಥರ ಪರವಾಗಿ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ, ಜನ ಪ್ರತಿನಿಧಿಗಳಿಗೆ, ಸಾರ್ವಜನಿಕರಿಗೆ ಇಂದಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.

Related posts

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!