26.7 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

ಇಂದು ಬೆಟ್ಟು: ಇಂದಬೆಟ್ಟು ಗ್ರಾಮದ ವಾರ್ಡ್ 3 ರಲ್ಲಿ ಪೇರದ್ದಪಲ್ಕೆ ಹಾನಿಬೆಟ್ಟು ತಿರುವಿನ ಪ್ರದೇಶದ ಸರ್ವೇ ನಂಬರ್ 234ರಲ್ಲಿ ಬೆಳ್ತಂಗಡಿ ತಹಶೀಲ್ದಾರ್ ರವರ ಆದೇಶ ಸಂಖ್ಯೆ NCRCR 181/2023.24 ರಂತೆ ಸರ್ಕಾರದ ಸ್ವಾಧೀನಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರ ನೇತೃತ್ವದಲ್ಲಿ ಪಡೆಯಲಾಯಿತು.
ಈ ಕಾರ್ಯಾಚರಣೆಯಲ್ಲಿ ಇಂದಬೆಟ್ಟು, ನಾವೂರು, ಕನ್ಯಾಡಿ, ಕಡಿರುಧ್ಯವರ, ಮಿತ್ತಬಾಗಿಲು, ಮಲವಂತಿಗೆ, ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಅಧಿಕಾರಿಗಳಿಗೆ ಸಹಕರಿಸಿದರು. ಬೆಳ್ತಂಗಡಿ ಮನೆಗಾರ್, ಇಂದಬೆಟ್ಟು ವಿ.ಎ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲಿಸ್ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಈ ಸ್ವಾಧೀನ ಪ್ರಕ್ರಿಯೆ ಬಗ್ಗೆ ಪ್ರತಿಕ್ರಿಯೆ ನೀಡಿದ

ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಅನಂದ ಅಡಿಲು ಹಲವು ದಶಕಗಳಿಂದ ಬೇಡಿಕೆ ಇರುವ ಹಾಗೂ ಇದರ ಬಗ್ಗೆ ನಿರಂತರವಾಗಿ ಸಾರ್ವಜನಿಕರು ಹಲವು ವರ್ಷಗಳಿಂದ ಗ್ರಾಮ ಸಭೆಗಳಲ್ಲಿ ಹೋರಾಟ ಮಾಡುತ್ತಿದ್ದು ಈ ಭಾಗದಲ್ಲಿ ಮೆಸ್ಕಾಂ ಇಲಾಖೆಯಿಂದ Sub-station ಸಬ್ ಸ್ಟೇಷನ್ ನಿರ್ಮಾಣ ಆಗುವ ಉದ್ದೇಶದಿಂದ ಸರ್ವೇ ನಂಬರ್ 234 */ ರಲ್ಲಿ ಸೂಕ್ತ ಸ್ಥಳವೆಂದು ಗ್ರಾಮ ಸಭೆಗಳಲ್ಲಿ ಗ್ರಾಮಸ್ಥರ ಆಗ್ರಹದಂತೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಂಡು ಮಾನ್ಯ ತಹಶೀಲ್ದಾರ ಮೂಲಕ ಈ ಪ್ರಕ್ರಿಯೆ ನಡೆದು ಇಂದು ಸ್ವಾಧೀನ ಪ್ರಕ್ರಿಯೆ ನಡೆದಿರುವುದು ಇದು ಸಮಸ್ತ ಗ್ರಾಮಸ್ಥರ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ, ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಮತ್ತು ಸಹಕಾರ ನೀಡಿದ ಸಮಸ್ತರಿಗೂ ವಂದನೆಗಳು ಸಲ್ಲಿಸುತ್ತಾ ಮುಂದೆಯೂ ಅಧಿಕಾರಿಗಳಿಗೆ ಸಮಸ್ತ ಗ್ರಾಮಸ್ಥರ ಪರವಾಗಿ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ, ಜನ ಪ್ರತಿನಿಧಿಗಳಿಗೆ, ಸಾರ್ವಜನಿಕರಿಗೆ ಇಂದಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.

Related posts

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya
error: Content is protected !!