25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆ. ಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್ ಪ್ರಯುಕ್ತ ನಡೆದ ಜುಮ್ಮಾ ಭಾಷಣದಲ್ಲಿ ನುಡಿದರು.

ಜೂ.7ರಂದು ಪರಸ್ಪರ ಶಾಂತಿ ಸೌಹಾರ್ದದಿಂದ ನಾವು ಬದುಕಿ ಬಾಳ ಬೇಕು ಜಗತ್ತಿನಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದರು. ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಖಾಫ್ ಸಲಹಾ ಮಂಡಳಿ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್. ಕಾಜೂರು, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್ ಹಾಗೂ ಸಮಿತಿ ಸದಸ್ಯರುಗಳು, ಜಮತ್ ಹಿರಿಯರು ಉಲಮಾ ಉಮರ ನಾಯಕರು, ಯುವಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Related posts

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya
error: Content is protected !!