September 6, 2026
ಕೃಷಿವರದಿಶಾಲಾ ಕಾಲೇಜು

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪೆರೋಡಿತ್ತಾಯಕಟ್ಟೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮುಸ್ತಫಾ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌.ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫರವರು ಅರಣ್ಯ ಇಲಾಖೆಯಿಂದ ತಾವೇ ಸ್ವತಃ ಗಿಡಗಳನ್ನು ತಂದು ಕೊಡುವ ವ್ಯವಸ್ಥೆಯನ್ನು ಮಾಡಿರುತ್ತಾರೆ.

ಶಾಲೆಯ ಕೆಲವು ವಿದ್ಯಾರ್ಥಿಗಳು ತೆಂಗಿನ ಸಸಿಗಳನ್ನು, ಹಣ್ಣು ಹಂಪಲಿನ ಗಿಡಗಳನ್ನು ಮನೆಯಿಂದ ತಂದು ಶಾಲಾ ಆವರಣದೊಳಗೆ ನೆಡುವುದರೊಂದಿಗೆ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಬಹುಮಾನ ನೀಡಿ ಅಭಿನಂದಿಸಲಾಯಿತು. ಶಾಲಾ ವಿಜ್ಞಾನ ಶಿಕ್ಷಕಿ ದೇವಿಕಾ ಪರಿಸರ ಸಂರಕ್ಷಣೆ ಮತ್ತು ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಪಾಯ್ಸ್ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya
error: Content is protected !!