23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!