26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!