22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!