July 23, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya
error: Content is protected !!