July 23, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!