23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಆರೋಪ:ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು-ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಜೂ.6 ರಂದು ಸಂಜೆ ತನ್ನ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಹಿಂಬಾಲಿಸಿಕೊಂಡು ಬಂದು ಮಾನಭಂಗಕ್ಕೆ ಯತ್ನಿಸಿದ್ದ ಎಂದು ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS 74,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸ್‌ಪೆಕ್ಟ‌ರ್ ಸಮರ್ಥ ಆ‌ರ್ ಗಾಣಿಗೇರ ಮತ್ತು ಸಿಬ್ಬಂದಿ ಪ್ರಕರಣ ಬಗ್ಗೆ ತನಿಖೆ ನಡೆಸಿ ವಿವಿಧ ಆಯಾಮಗಳಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಜೂ.7 ರಂದು ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಮುಂಡೇಲು ನಿವಾಸಿ ಎಮ್.ಡಿ.ನಿಯಾಜ್(20 ವ) ಎಂಬಾತನನ್ನು ಕಕ್ಕಿಂಜೆಯಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೂ.6 ರಂದು ಸಂಜೆ ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!