26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!