22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya
error: Content is protected !!