23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya
error: Content is protected !!