September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!