23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕಾರ್ಯಕ್ರಮ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಡವರ ಸಬಲೀಕರಣ ಕಾರ್ಯದ ಜೊತೆಗೆ ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಯನ್ನು ನೀಡಿದ ದುಗ್ಗಪ್ಪ ನವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.

ಅವರು ಕೊಯ್ಯೂರು ಗ್ರಾಮದ ದಿ. ತಿಮ್ಮಯ ಗೌಡ ಹಾಗೂ ದಿ.ಶ್ರೀಮತಿ ನೀಲಮ್ಮ ಅವರ ಪುತ್ರರಾಗಿದ್ದು ಕಡಿರುದ್ಯಾವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೇವಾನಿರತನಾಗಿ ಕರ್ತವ್ಯಕ್ಕೆ ಸೇರ್ಪಡೆಯಾಗಿ, ನಂತರ ಕಾರ್ಯನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿ, ಮೇಲ್ವಿಚಾರಕರ ಹುದ್ದೆಗೆ ಭಡ್ತಿ ಹೊಂದಿ ಲಾಯಿಲ, ಉಜಿರೆ, ಕನ್ಯಾಡಿ ಮತ್ತು ಕಾರ್ಕಳದಲ್ಲಿ ಮೇಲ್ವಿಚಾರಕನಾಗಿ ಕರ್ತವ್ಯ ನಿರ್ವಹಿಸಿ, ಮೇಲ್ವಿಚಾರಕರ ಹುದ್ದೆಗೆ ಬಡ್ತಿಗೊಂಡು, ಪುತ್ತೂರು ತಾಲೂಕಿಗೆ ಯೋಜನಾಧಿಕಾರಿಯಾಗಿ ಸೇರ್ಪಡೆಗೊಂಡು 3 ವರ್ಷ ಸೇವೆ ಸಲ್ಲಿಸಿದರು. ನಿರ್ದೇಶಕರಾಗಿ ಶಿವಮೊಗ್ಗ, ಉಡುಪಿ, ಕಲಬುರಗಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. 2023ರಿಂದ ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಜೂ.1ರಂದು ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya
error: Content is protected !!