25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನದ ಪ್ರಯುಕ್ತ ಗೇರುಕಟ್ಟೆ ಸಯ್ಯದ್ ಉಮರ್ ಅಸ್ಸಖಾಫ್ ತಂಙಳ್ನೇತೃತ್ವದ ಮನ್‌ಶರ್ ವಿವಿಧ ವಿದ್ಯಾ ಸಂಸ್ಥೆಗಳ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ವಲಯ ಬೆಳ್ತಂಗಡಿ ಇದರ ಸಹಯೋಗದಲ್ಲಿ ಇಂದಬೆಟ್ಟು ಗಸ್ತು ವ್ಯಾಪ್ತಿಯ ಕುದುರೆಮುಖ ರಕ್ಷಿತಾ ಅರಣ್ಯದಲ್ಲಿ 200ಕ್ಕಿಂತ ಅಧಿಕ ಉಪಯುಕ್ತ ಗಿಡಗಳನ್ನು ನೆಡುವುದರ ಮೂಲಕ ಬಹಳ ವನಮಹೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಡು ಬೆಳೆಸುವುದರ ಮಹತ್ವ, ಔಷಧಿ ಸಸ್ಯಗಳ ಮಹತ್ವ ಅದರ ಗುರುತು ಪತ್ತೆ ಹಚ್ಚುವಿಕೆ ಹಾಗೂ ವೈಜ್ಞಾನಿಕವಾಗಿ ಗಿಡ ನೆಡುವುದರ ಬಗ್ಗೆ ಸವಿಸ್ತಾರವಾಗಿ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟ್ ಅಧಿಕಾರಿ ಭರತೇಶ್ ಸುವರ್ಣ, ಅರಣ್ಯ ವೀಕ್ಷಕರಾದ ಸತೀಶ್, ಸ್ವಾದಿಕ್, ಪ್ರವೀಣ್, ಗೋಪಾಲ್, ಇವರು ಮಾಹಿತಿ‌ ನೀಡಿದರು.

ಮನ್‌ಶರ್ ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಲ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ, ಪ್ಯಾರಾಮೆಡಿಕಲ್ ಕಾಲೇಜು ಉಪನ್ಯಾಸಕಿ ಪವಿತ್ರಾ ಎಚ್, ಪಿಯು ಕಾಲೇಜು ಉಪನ್ಯಾಸಕಿ ಸುಪ್ರಿಯಾ ಜಾದವ್, ಪ್ಯಾರಾಮೆಡಿಕಲ್ ಪಿಯು ಕಾಲೇಜು ಸ್ಕೂಲ್ ನ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಮನ್‌ಶರ್ ಎನ್.ಎಸ್.ಎಸ್ ಘಟಕದ ನಿರ್ವಹಣಾಧಿಕಾರಿ ಮುಹಮ್ಮದ್ ತೌಫಿಕ್ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಿದರು.

Related posts

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya
error: Content is protected !!