July 23, 2026
ತಾಲೂಕು ಸುದ್ದಿ

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

ಇಂದು ಬೆಟ್ಟು: ಇಂದಬೆಟ್ಟು ಗ್ರಾಮದ ವಾರ್ಡ್ 3 ರಲ್ಲಿ ಪೇರದ್ದಪಲ್ಕೆ ಹಾನಿಬೆಟ್ಟು ತಿರುವಿನ ಪ್ರದೇಶದ ಸರ್ವೇ ನಂಬರ್ 234ರಲ್ಲಿ ಬೆಳ್ತಂಗಡಿ ತಹಶೀಲ್ದಾರ್ ರವರ ಆದೇಶ ಸಂಖ್ಯೆ NCRCR 181/2023.24 ರಂತೆ ಸರ್ಕಾರದ ಸ್ವಾಧೀನಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರ ನೇತೃತ್ವದಲ್ಲಿ ಪಡೆಯಲಾಯಿತು.
ಈ ಕಾರ್ಯಾಚರಣೆಯಲ್ಲಿ ಇಂದಬೆಟ್ಟು, ನಾವೂರು, ಕನ್ಯಾಡಿ, ಕಡಿರುಧ್ಯವರ, ಮಿತ್ತಬಾಗಿಲು, ಮಲವಂತಿಗೆ, ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಅಧಿಕಾರಿಗಳಿಗೆ ಸಹಕರಿಸಿದರು. ಬೆಳ್ತಂಗಡಿ ಮನೆಗಾರ್, ಇಂದಬೆಟ್ಟು ವಿ.ಎ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲಿಸ್ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಈ ಸ್ವಾಧೀನ ಪ್ರಕ್ರಿಯೆ ಬಗ್ಗೆ ಪ್ರತಿಕ್ರಿಯೆ ನೀಡಿದ

ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಅನಂದ ಅಡಿಲು ಹಲವು ದಶಕಗಳಿಂದ ಬೇಡಿಕೆ ಇರುವ ಹಾಗೂ ಇದರ ಬಗ್ಗೆ ನಿರಂತರವಾಗಿ ಸಾರ್ವಜನಿಕರು ಹಲವು ವರ್ಷಗಳಿಂದ ಗ್ರಾಮ ಸಭೆಗಳಲ್ಲಿ ಹೋರಾಟ ಮಾಡುತ್ತಿದ್ದು ಈ ಭಾಗದಲ್ಲಿ ಮೆಸ್ಕಾಂ ಇಲಾಖೆಯಿಂದ Sub-station ಸಬ್ ಸ್ಟೇಷನ್ ನಿರ್ಮಾಣ ಆಗುವ ಉದ್ದೇಶದಿಂದ ಸರ್ವೇ ನಂಬರ್ 234 */ ರಲ್ಲಿ ಸೂಕ್ತ ಸ್ಥಳವೆಂದು ಗ್ರಾಮ ಸಭೆಗಳಲ್ಲಿ ಗ್ರಾಮಸ್ಥರ ಆಗ್ರಹದಂತೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಂಡು ಮಾನ್ಯ ತಹಶೀಲ್ದಾರ ಮೂಲಕ ಈ ಪ್ರಕ್ರಿಯೆ ನಡೆದು ಇಂದು ಸ್ವಾಧೀನ ಪ್ರಕ್ರಿಯೆ ನಡೆದಿರುವುದು ಇದು ಸಮಸ್ತ ಗ್ರಾಮಸ್ಥರ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ, ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಮತ್ತು ಸಹಕಾರ ನೀಡಿದ ಸಮಸ್ತರಿಗೂ ವಂದನೆಗಳು ಸಲ್ಲಿಸುತ್ತಾ ಮುಂದೆಯೂ ಅಧಿಕಾರಿಗಳಿಗೆ ಸಮಸ್ತ ಗ್ರಾಮಸ್ಥರ ಪರವಾಗಿ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ, ಜನ ಪ್ರತಿನಿಧಿಗಳಿಗೆ, ಸಾರ್ವಜನಿಕರಿಗೆ ಇಂದಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.

Related posts

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!