24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆ. ಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್ ಪ್ರಯುಕ್ತ ನಡೆದ ಜುಮ್ಮಾ ಭಾಷಣದಲ್ಲಿ ನುಡಿದರು.

ಜೂ.7ರಂದು ಪರಸ್ಪರ ಶಾಂತಿ ಸೌಹಾರ್ದದಿಂದ ನಾವು ಬದುಕಿ ಬಾಳ ಬೇಕು ಜಗತ್ತಿನಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದರು. ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಖಾಫ್ ಸಲಹಾ ಮಂಡಳಿ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್. ಕಾಜೂರು, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್ ಹಾಗೂ ಸಮಿತಿ ಸದಸ್ಯರುಗಳು, ಜಮತ್ ಹಿರಿಯರು ಉಲಮಾ ಉಮರ ನಾಯಕರು, ಯುವಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Related posts

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya
error: Content is protected !!