24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya
error: Content is protected !!