ನಾರಾವಿ: ಕರ್ನಾಟಕ ಅರಣ್ಯ ಇಲಾಖೆ, ಗ್ರಾ.ಪಂ. ನಾರಾವಿ, ಕೃ.ಪ.ಸ. ಸಂಘ ನಾರಾವಿ, ಜನಸೇವಾ ಟ್ರಸ್ಟ್ ನಾರಾವಿ, ಸರ್ಕಾರಿ ಪ್ರೌಢ ಶಾಲೆ ನಾರಾವಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇದರ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ಹಣ್ಣಿನ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 300 ವಿದ್ಯಾರ್ಥಿಗಳಿಗೆ ವಿವಿಧ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ ಸುನಿಲ್ ಕೆ.ಎಸ್., ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ. ವಿಶ್ವ ಪರಿಸರ ದಿನದ ಮಹತ್ವ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯ ಬಗ್ಗೆ ವಿಶೇಷ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಬೀಟ್ ಮಂಜುನಾಥ ಸಾವಳಿ, ಜಾನ್, ನಾರಾವಿ ಅರಣ್ಯ ರಕ್ಷಕರಾದ ಮಂಜುನಾಥ್, ನಾರಾವಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಸುಮಿತ್ರಾ, ಗ್ರಾ.ಪಂ. ಸದಸ್ಯರಾದ ವಸಂತ ಪಡ್ಡಾಯಿಕಾಪು, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ನಿರ್ದೇಶಕ ಉದಯ್ ಹೆಗ್ಡೆ, ನಾರಾವಿ ಜನಸೇವಾ ಟ್ರಸ್ಟ್ ಅಧ್ಯಕ್ಷ ಅಭಿಜಿತ್ ಜೈನ್, ಕಾರ್ಯದರ್ಶಿ ಸದಾನಂದ ಬಂಗೇರ, ಸರ್ಕಾರಿ ಪ್ರೌಢ ಶಾಲಾ ಮುಖ್ಯ್ಯೊಪಾಧ್ಯಾಯಿನಿ ಸುಶೀಲ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ್ಯೋಪಾಧ್ಯಾಯ ಪ್ರಭಾಕರ್ ಮತ್ತು ಶಿಕ್ಷಕ ವೃಂದದವರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.