24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya
error: Content is protected !!