25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!