23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!