25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!