23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!