July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ.೬ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ ಪ್ರದರ್ಶಿಸಿದರು.

ಮುಖ್ಯ ಅತಿಥಿ ಮಡಂತ್ಯಾರು ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ ಲ್ಯಾರಿ ಫ್ರಾಂಕ್ಲಿನ್ ಪಿಂಟೋ ಮಾತನಾಡಿ ನಾವು ಬೇರೆಯವರಿಗೆ ದಾನ ಮಾಡಿದರೆ ನಮಗೆ ದೇವರು ಅದಕ್ಕಿಂತ ಜಾಸ್ತಿ ಕೊಡುತ್ತಾನೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯವನ್ನು ಕೋರಿದರು.

ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸ ಮಾತನಾಡಿ ನಾವು ತ್ಯಾಗ ಮಾಡುವುದರ ಜೊತೆಗೆ ಬೇರೆಯವರ ಬಗ್ಗೆ ಕಾಳಜಿ ವಹಿಸಬೇಕೆಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಕೋರಿದರು.
ವಿದ್ಯಾರ್ಥಿಗಳಾದ ಕು. ರಿವಾನಿಯ ಶಾನ್ವಿ ನಿರೂಪಿಸಿ, ಮಿನ್ಶ ಹನೀಫ್ ಸ್ವಾಗತಿಸಿ, ಮಹಮ್ಮದ್ ಫಾಹಿಝ್ ವಂದಿಸಿದರು.

Related posts

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!