25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya
error: Content is protected !!