September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಿಂದ ಆಟಿ ಕೂಟ ಸಂಭ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya
error: Content is protected !!