26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya
error: Content is protected !!