23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya
error: Content is protected !!