24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕಾರ್ಯಕ್ರಮ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಡವರ ಸಬಲೀಕರಣ ಕಾರ್ಯದ ಜೊತೆಗೆ ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಯನ್ನು ನೀಡಿದ ದುಗ್ಗಪ್ಪ ನವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.

ಅವರು ಕೊಯ್ಯೂರು ಗ್ರಾಮದ ದಿ. ತಿಮ್ಮಯ ಗೌಡ ಹಾಗೂ ದಿ.ಶ್ರೀಮತಿ ನೀಲಮ್ಮ ಅವರ ಪುತ್ರರಾಗಿದ್ದು ಕಡಿರುದ್ಯಾವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೇವಾನಿರತನಾಗಿ ಕರ್ತವ್ಯಕ್ಕೆ ಸೇರ್ಪಡೆಯಾಗಿ, ನಂತರ ಕಾರ್ಯನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿ, ಮೇಲ್ವಿಚಾರಕರ ಹುದ್ದೆಗೆ ಭಡ್ತಿ ಹೊಂದಿ ಲಾಯಿಲ, ಉಜಿರೆ, ಕನ್ಯಾಡಿ ಮತ್ತು ಕಾರ್ಕಳದಲ್ಲಿ ಮೇಲ್ವಿಚಾರಕನಾಗಿ ಕರ್ತವ್ಯ ನಿರ್ವಹಿಸಿ, ಮೇಲ್ವಿಚಾರಕರ ಹುದ್ದೆಗೆ ಬಡ್ತಿಗೊಂಡು, ಪುತ್ತೂರು ತಾಲೂಕಿಗೆ ಯೋಜನಾಧಿಕಾರಿಯಾಗಿ ಸೇರ್ಪಡೆಗೊಂಡು 3 ವರ್ಷ ಸೇವೆ ಸಲ್ಲಿಸಿದರು. ನಿರ್ದೇಶಕರಾಗಿ ಶಿವಮೊಗ್ಗ, ಉಡುಪಿ, ಕಲಬುರಗಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. 2023ರಿಂದ ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಜೂ.1ರಂದು ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya
error: Content is protected !!