July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

ಉಜಿರೆ: ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೇಳೆ ನಡೆದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂರು ಅಂಗಡಿಯ ಶಟರ್ ಗೆ ಹಾಕಿದ್ದ ಬೀಗಕ್ಕೆ ಸುತ್ತಿಗೆಯಿಂದ ಮುರಿದು ಒಳನುಗ್ಗಿ ಒಟ್ಟು 38 ಸಾವಿರ ರೂಪಾಯಿ ಹಣ ಕಳ್ಳತನ ಮಾಡಲಾಗಿದೆ.

ಬಾಲಾಜಿ ಎಂಟ‌ರ್ ಪ್ರೈಸ್ ನಿಂದ 30 ಸಾವಿರ ನಗದು, ಮಧುರ ಎಂಟರ್ ಪ್ರೈಸ್ ನಿಂದ 6 ಸಾವಿರ ರೂಪಾಯಿ, ಗಣೇಶ್ ಇಲೆಕ್ನಿಕಲ್ ನಿಂದ 2 ಸಾವಿರ ರೂಪಾಯಿ ಕಳ್ಳತನ ಮಾಡಲಾಗಿದೆ ಎಂದು ಬಾಲಾಜಿ ಅಂಗಡಿ ಮಾಲೀಕ ಹರೀಶ್ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಜೂ.8 ರಂದು ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಹಾಗೂ ಮಂಗಳೂರಿನಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya
error: Content is protected !!