September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಮುಂಡಾಜೆ: ಕಟೀಲು ಮೇಳದ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವ) ನಿನ್ನೆ ರಾತ್ರಿ(ಜೂ.7) ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಕದ್ರಿ, ಕರ್ಣಾಟಕ, ಕುಂಬಳೆ, ಬಪ್ಪನಾಡು, ಧರ್ಮಸ್ಥಳ ಸೇರಿದಂತೆ ಹಲವಾರು ಮೇಳಗಳಲ್ಲಿ ಕಳೆದ ಐವತ್ತು ವರ್ಷಗಳಿಂದ ಪಾತ್ರಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.

ಪ್ರಸ್ತುತ ಇವರು ತಮ್ಮ ಕುಟುಂಬದೊಂದಿಗೆ ಮಂಗಳೂರಿನ ವಾಮಂಜೂರಿನಲ್ಲಿ ವಾಸ್ತ್ಯವ್ಯ ಹೊಂದಿದ್ದರು. ಮೃತರು ಪತ್ನಿ, ಈರ್ವರು ಗಂಡು ಮಕ್ಕಳು, ಓರ್ವೆ ಪುತ್ರಿ , ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನೂ ಅಗಲಿದ್ದಾರೆ.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya
error: Content is protected !!