July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಮುಂಡಾಜೆ: ಕಟೀಲು ಮೇಳದ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವ) ನಿನ್ನೆ ರಾತ್ರಿ(ಜೂ.7) ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಕದ್ರಿ, ಕರ್ಣಾಟಕ, ಕುಂಬಳೆ, ಬಪ್ಪನಾಡು, ಧರ್ಮಸ್ಥಳ ಸೇರಿದಂತೆ ಹಲವಾರು ಮೇಳಗಳಲ್ಲಿ ಕಳೆದ ಐವತ್ತು ವರ್ಷಗಳಿಂದ ಪಾತ್ರಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.

ಪ್ರಸ್ತುತ ಇವರು ತಮ್ಮ ಕುಟುಂಬದೊಂದಿಗೆ ಮಂಗಳೂರಿನ ವಾಮಂಜೂರಿನಲ್ಲಿ ವಾಸ್ತ್ಯವ್ಯ ಹೊಂದಿದ್ದರು. ಮೃತರು ಪತ್ನಿ, ಈರ್ವರು ಗಂಡು ಮಕ್ಕಳು, ಓರ್ವೆ ಪುತ್ರಿ , ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನೂ ಅಗಲಿದ್ದಾರೆ.

Related posts

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!