23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

ಉಜಿರೆ: ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೇಳೆ ನಡೆದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂರು ಅಂಗಡಿಯ ಶಟರ್ ಗೆ ಹಾಕಿದ್ದ ಬೀಗಕ್ಕೆ ಸುತ್ತಿಗೆಯಿಂದ ಮುರಿದು ಒಳನುಗ್ಗಿ ಒಟ್ಟು 38 ಸಾವಿರ ರೂಪಾಯಿ ಹಣ ಕಳ್ಳತನ ಮಾಡಲಾಗಿದೆ.

ಬಾಲಾಜಿ ಎಂಟ‌ರ್ ಪ್ರೈಸ್ ನಿಂದ 30 ಸಾವಿರ ನಗದು, ಮಧುರ ಎಂಟರ್ ಪ್ರೈಸ್ ನಿಂದ 6 ಸಾವಿರ ರೂಪಾಯಿ, ಗಣೇಶ್ ಇಲೆಕ್ನಿಕಲ್ ನಿಂದ 2 ಸಾವಿರ ರೂಪಾಯಿ ಕಳ್ಳತನ ಮಾಡಲಾಗಿದೆ ಎಂದು ಬಾಲಾಜಿ ಅಂಗಡಿ ಮಾಲೀಕ ಹರೀಶ್ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಜೂ.8 ರಂದು ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಹಾಗೂ ಮಂಗಳೂರಿನಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!