22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

ಉಜಿರೆ: ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೇಳೆ ನಡೆದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂರು ಅಂಗಡಿಯ ಶಟರ್ ಗೆ ಹಾಕಿದ್ದ ಬೀಗಕ್ಕೆ ಸುತ್ತಿಗೆಯಿಂದ ಮುರಿದು ಒಳನುಗ್ಗಿ ಒಟ್ಟು 38 ಸಾವಿರ ರೂಪಾಯಿ ಹಣ ಕಳ್ಳತನ ಮಾಡಲಾಗಿದೆ.

ಬಾಲಾಜಿ ಎಂಟ‌ರ್ ಪ್ರೈಸ್ ನಿಂದ 30 ಸಾವಿರ ನಗದು, ಮಧುರ ಎಂಟರ್ ಪ್ರೈಸ್ ನಿಂದ 6 ಸಾವಿರ ರೂಪಾಯಿ, ಗಣೇಶ್ ಇಲೆಕ್ನಿಕಲ್ ನಿಂದ 2 ಸಾವಿರ ರೂಪಾಯಿ ಕಳ್ಳತನ ಮಾಡಲಾಗಿದೆ ಎಂದು ಬಾಲಾಜಿ ಅಂಗಡಿ ಮಾಲೀಕ ಹರೀಶ್ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಜೂ.8 ರಂದು ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಹಾಗೂ ಮಂಗಳೂರಿನಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!