25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

ಉಜಿರೆ: ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೇಳೆ ನಡೆದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂರು ಅಂಗಡಿಯ ಶಟರ್ ಗೆ ಹಾಕಿದ್ದ ಬೀಗಕ್ಕೆ ಸುತ್ತಿಗೆಯಿಂದ ಮುರಿದು ಒಳನುಗ್ಗಿ ಒಟ್ಟು 38 ಸಾವಿರ ರೂಪಾಯಿ ಹಣ ಕಳ್ಳತನ ಮಾಡಲಾಗಿದೆ.

ಬಾಲಾಜಿ ಎಂಟ‌ರ್ ಪ್ರೈಸ್ ನಿಂದ 30 ಸಾವಿರ ನಗದು, ಮಧುರ ಎಂಟರ್ ಪ್ರೈಸ್ ನಿಂದ 6 ಸಾವಿರ ರೂಪಾಯಿ, ಗಣೇಶ್ ಇಲೆಕ್ನಿಕಲ್ ನಿಂದ 2 ಸಾವಿರ ರೂಪಾಯಿ ಕಳ್ಳತನ ಮಾಡಲಾಗಿದೆ ಎಂದು ಬಾಲಾಜಿ ಅಂಗಡಿ ಮಾಲೀಕ ಹರೀಶ್ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಜೂ.8 ರಂದು ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಹಾಗೂ ಮಂಗಳೂರಿನಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!