28.3 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಮುಂಡಾಜೆ: ಕಟೀಲು ಮೇಳದ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವ) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಕದ್ರಿ, ಕರ್ಣಾಟಕ, ಕುಂಬಳೆ, ಬಪ್ಪನಾಡು, ಧರ್ಮಸ್ಥಳ ಸೇರಿದಂತೆ ಹಲವಾರು ಮೇಳಗಳಲ್ಲಿ ಕಳೆದ ಐವತ್ತು ವರ್ಷಗಳಿಂದ ಪಾತ್ರಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.

ಪ್ರಸ್ತುತ ಇವರು ತಮ್ಮ ಕುಟುಂಬದೊಂದಿಗೆ ಮಂಗಳೂರಿನ ವಾಮಂಜೂರಿನಲ್ಲಿ ವಾಸ್ತ್ಯವ್ಯ ಹೊಂದಿದ್ದರು. ಮೃತರು ಪತ್ನಿ, ಈರ್ವರು ಗಂಡು ಮಕ್ಕಳು, ಓರ್ವೆ ಪುತ್ರಿ , ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನೂ ಅಗಲಿದ್ದಾರೆ.

Related posts

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya
error: Content is protected !!