37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಮುಂಡಾಜೆ: ಕಟೀಲು ಮೇಳದ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವ) ನಿನ್ನೆ ರಾತ್ರಿ(ಜೂ.7) ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಕದ್ರಿ, ಕರ್ಣಾಟಕ, ಕುಂಬಳೆ, ಬಪ್ಪನಾಡು, ಧರ್ಮಸ್ಥಳ ಸೇರಿದಂತೆ ಹಲವಾರು ಮೇಳಗಳಲ್ಲಿ ಕಳೆದ ಐವತ್ತು ವರ್ಷಗಳಿಂದ ಪಾತ್ರಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.

ಪ್ರಸ್ತುತ ಇವರು ತಮ್ಮ ಕುಟುಂಬದೊಂದಿಗೆ ಮಂಗಳೂರಿನ ವಾಮಂಜೂರಿನಲ್ಲಿ ವಾಸ್ತ್ಯವ್ಯ ಹೊಂದಿದ್ದರು. ಮೃತರು ಪತ್ನಿ, ಈರ್ವರು ಗಂಡು ಮಕ್ಕಳು, ಓರ್ವೆ ಪುತ್ರಿ , ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನೂ ಅಗಲಿದ್ದಾರೆ.

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!