July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭೀಕರ ಹತ್ಯೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಕಾ ದಳಕ್ಕೆ ವಹಿಸಿದ್ದು ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಮಾಜ ಇದನ್ನು ಮನಪೂರ್ವಕವಾಗಿ ಸ್ವಾಗತಿಸುತ್ತಿದೆ.

ಸುಹಸ್ ಶೆಟ್ಟಿ ಅವರ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಪಿ ಎಫ್ ಐ ಹಾಗೂ ಇನ್ನಿತರ ಜಿಹಾದಿ ಸಂಘಟನೆಗಳ ಬೇರುಗಳನ್ನು ಬುಡ ಸಮೇತ ಕಿತ್ತು ಹಾಕಲು ಮತ್ತು ಈ ಹತ್ಯೆಯ ಹಿಂದಿರುವ ಕಾಣದ ಕೈಗಳನ್ನು ಪತ್ತೆಹಚ್ಚಿ, ಈ ಸಂಚಿಗೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನು ಒದಗಿಸಿದ ದೇಶ ಹಾಗು ಪರದೇಶಗಳ ಹಣದ ಮೂಲಗಳನ್ನು ಪತ್ತೆಹಚ್ಚಲು NIA ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ ಎನ್ನುವ ವಿಶ್ವಾಸ ನನಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬೇರು ಬಿಟ್ಟಿರುವ ಜಿಹಾದಿಗಳನ್ನು ಮೂಲಭೂತ ವಾದಿ ಸಂಘಟನೆಗಳನ್ನು ಮಟ್ಟ ಹಾಕಲು ರಾಷ್ಟ್ರೀಯ ತನಿಖಾ ದಳ ನಡೆಸುವ ತನಿಖೆ ಅತ್ಯಂತ ಸಹಕಾರಿಯಾಗಲಿದೆ ಎನ್ನುವ ವಿಶ್ವಾಸ ನಮಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ತನ್ನ ತುಷ್ಟಿಕರಣದ ರಾಜಕೀಯವನ್ನು ಮುಂದುವರಿಸಿ ಸುಹಾಸ್ ಶೆಟ್ಟಿಯವರ ಹತ್ಯೆಯ ತನಿಖೆಯನ್ನು NIA ಗೇ ವಹಿಸಲು ನಿರಾಕರಿಸಿದಾಗ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರ ನೇತೃತ್ವದ ಕೇಂದ್ರ ಸರ್ಕಾರ ಮುಂದಾಳತ್ವವನ್ನು ವಹಿಸಿಕೊಂಡು ಈ ತನಿಖೆಯನ್ನು NIA ಗೇ ವಹಿಸಿದೆ ಈ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜಿಯವರಿಗೆ,ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಹಾಗೂ ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಂಘಟನೆಗಳ ಹಿರಿಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ.

Related posts

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!