23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಮುಂಡಾಜೆ: ಕಟೀಲು ಮೇಳದ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವ) ನಿನ್ನೆ ರಾತ್ರಿ(ಜೂ.7) ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಕದ್ರಿ, ಕರ್ಣಾಟಕ, ಕುಂಬಳೆ, ಬಪ್ಪನಾಡು, ಧರ್ಮಸ್ಥಳ ಸೇರಿದಂತೆ ಹಲವಾರು ಮೇಳಗಳಲ್ಲಿ ಕಳೆದ ಐವತ್ತು ವರ್ಷಗಳಿಂದ ಪಾತ್ರಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.

ಪ್ರಸ್ತುತ ಇವರು ತಮ್ಮ ಕುಟುಂಬದೊಂದಿಗೆ ಮಂಗಳೂರಿನ ವಾಮಂಜೂರಿನಲ್ಲಿ ವಾಸ್ತ್ಯವ್ಯ ಹೊಂದಿದ್ದರು. ಮೃತರು ಪತ್ನಿ, ಈರ್ವರು ಗಂಡು ಮಕ್ಕಳು, ಓರ್ವೆ ಪುತ್ರಿ , ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನೂ ಅಗಲಿದ್ದಾರೆ.

Related posts

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!