September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

ಬೆಳ್ತಂಗಡಿ: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ಇದರ ಆಪ್ತ ಸಮಾಲೋಚಕಿ ಮತ್ತು ಖ್ಯಾತ ಪ್ರೇರಕಿ ಪುತ್ತೂರಿನ ಡಾ. ವಾಜಿದ ಬಾನು ಅವರು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ NSS ವಿಭಾಗ ಮತ್ತು ಯೆನೆಪೋಯ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಆಯೋಜಿಸಲಾದ ಪ್ರತಿಷ್ಠಿತ ಅಂತರರಾಷ್ಟ್ರೀಯ ಜಾಗತಿಕ ಯುವ ಶೃಂಗಸಭೆ-2025 ರಲ್ಲಿ ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ನ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ.

18 ವಿವಿಧ ದೇಶಗಳಿಂದ 1200ಕ್ಕೂ ಹೆಚ್ಚು ಪ್ರತಿನಿಧಿಗಳ ಸಮ್ಮುಖದಲ್ಲಿ ಡಾ. ವಾಜಿದ ಬಾನು “ಐಡಿಯಾ ವರ್ಸ್: ಯೂತ್ ಇನ್ನೋವೇಶನ್ ಫಾರ್ ಎ ನ್ಯೂ ಇಂಡಿಯಾ” ಎಂಬ ವಿಷಯದ ಕುರಿತು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿ ವಿಚಾರವನ್ನು ಮಂಡಿಸಿದರು. ಅವರ ಭಾಷಣದಲ್ಲಿ ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಷನ್ ನ ಮೂಲ ಉದ್ದೇಶ, ಬೆಳವಣಿಗೆ ಮತ್ತು ದೃಷ್ಟಿಕೋನವನ್ನು ವಿವರಿಸಿದರು.

ಶಿಕ್ಷಣ ವ್ಯವಸ್ಥೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ನೈಜ ಸವಾಲುಗಳನ್ನು ಪರಿಹರಿಸುವ ಒಂದು ಉಪಕ್ರಮವಾಗಿ ವಿದ್ಯಾರ್ಥಿ-ಕೇಂದ್ರಿತ ಅಪ್ಲಿಕೇಶನ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿದರು. ಮಾತ್ರವಲ್ಲದೆ ಶಿಕ್ಷಣದಲ್ಲಿ ಬೆಂಬಲ ವ್ಯವಸ್ಥೆಗಳನ್ನು ಮರು ವ್ಯಾಖ್ಯಾನಿಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಅವರ ಮಾತುಗಳು ತನ್ನ ನಾವೀನ್ಯತೆ ಮತ್ತು ಸ್ಪಷ್ಟತೆಗಾಗಿ, ಮನಸ್ಸುಗಳನ್ನು ಬೆಳಗಿಸಿದ್ದಕ್ಕಾಗಿ ಮತ್ತು ಪ್ರಪಂಚದಾದ್ಯಂತದ ಪ್ರತಿನಿಧಿಗಳಿಂದ ಕುತೂಹಲವನ್ನು ಹುಟ್ಟುಹಾಕಿದ್ದಕ್ಕಾಗಿ ಮೆಚ್ಚುಗೆ ಪಡೆಯಿತು. ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ನ ಧೈಯ ಮತ್ತು ಯುವ ಸಮುದಾಯವನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಅದು ತರುವ ಪರಿಹಾರದಿಂದ ಅನೇಕರು ಪ್ರಭಾವಿತರಾದರು. EEF ಗೆ ಈ ಹೆಮ್ಮೆಯ ಕ್ಷಣವನ್ನು ತಂದು ಕೊಟ್ಟ ಡಾ. ವಾಜಿದ ಬಾನು ರವರನ್ನು ಸಂಸ್ಥೆಯ ಅಧ್ಯಕ್ಷ ಅಮ್ಮದ್ ಖಾನ್ ಪೋಳ್ಯ ಅಭಿನಂದಿಸಿದ್ದಾರೆ.

Related posts

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya
error: Content is protected !!