23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿ ಆಂಧ್ರಪ್ರದೇಶ ಕಡಪಾದ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಅನುಪಮಾನಂದಜೀಯವರು ವಿವೇಕಾನಂದರ ಶಿಕ್ಷಣ ತತ್ವಗಳು ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡಿ ವಿವೇಕಾನಂದರು ನಮಗೆ ಆದರ್ಶ ವ್ಯಕ್ತಿ. ಅವರ ವಿಚಾರಧಾರೆ, ಚಿಂತನೆ ಮತ್ತು ಬದುಕಿನ ಹಾದಿ ನಮಗೆ ಸ್ಫೂರ್ತಿ. ಆದುದರಿಂದ ವೈಚಾರಿಕ ಸ್ವಾವಲಂಬನೆ ನೀಡುವುದೇ ಶಿಕ್ಷಣವಾಗಿದೆ. ಶಿಕ್ಷಣವು ದೇಶಾಭಿಮಾನ ಬೆಳೆಸುವುದರೊಂದಿಗೆ ಸರ್ವ ಸಮಸ್ಯೆಗೆ ಔಷಧಿಯಾಗಿದ್ದು ಸರ್ವತೋಮುಖ ಬೆಳವಣಿಗೆಗೆ ಸಾಧ್ಯವಾಗಿದೆ. ಶಿಕ್ಷಕರು ತಮ್ಮ ಶಿಕ್ಷಣ ವಿದ್ಯಾಲಯ ಮತ್ತು ಪಠ್ಯ ವಿಷಯದ ಬಗ್ಗೆ ಗೌರವವಿಟ್ಟು ಪ್ರತಿಯೊಬ್ಬವಿದ್ಯಾರ್ಥಿಗೂ ಮಹತ್ವ ನೀಡಿದಾಗ ವಿದ್ಯಾರ್ಥಿಯ ಬದುಕಿನ ಹಾದಿ ಸುಗಮವಾಗುತ್ತದೆ ಎಂದರು.

ಕ್ಯಾ. ಬೆಳ್ಳಾಲ ಗೋಪಿನಾಥ್ ಸ್ವಾಮಿ ವಿವೇಕಾನಂದರ ಬಗ್ಗೆ ಮತ್ತು ಶ್ರೀ ರಾಮಕೃಷ್ಣ ಆಶ್ರಮದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜೀಯವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್, ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ, ಶ್ರೀ. ಧ. ಮಂ. ವಸತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಇತರ ಅಂಗಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸಾಯಿಧೃತಿ ಸ್ವಾಮಿ ಅನುಪಮಾನಂದಜೀ ಯವರನ್ನು ಪರಿಚಯಿಸಿ, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ತೇಜಸ್ವಿನಿ ಕಾಯಕ್ರಮ ನಿರೂಪಿಸಿದರು.

Related posts

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!