July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿ ಆಂಧ್ರಪ್ರದೇಶ ಕಡಪಾದ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಅನುಪಮಾನಂದಜೀಯವರು ವಿವೇಕಾನಂದರ ಶಿಕ್ಷಣ ತತ್ವಗಳು ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡಿ ವಿವೇಕಾನಂದರು ನಮಗೆ ಆದರ್ಶ ವ್ಯಕ್ತಿ. ಅವರ ವಿಚಾರಧಾರೆ, ಚಿಂತನೆ ಮತ್ತು ಬದುಕಿನ ಹಾದಿ ನಮಗೆ ಸ್ಫೂರ್ತಿ. ಆದುದರಿಂದ ವೈಚಾರಿಕ ಸ್ವಾವಲಂಬನೆ ನೀಡುವುದೇ ಶಿಕ್ಷಣವಾಗಿದೆ. ಶಿಕ್ಷಣವು ದೇಶಾಭಿಮಾನ ಬೆಳೆಸುವುದರೊಂದಿಗೆ ಸರ್ವ ಸಮಸ್ಯೆಗೆ ಔಷಧಿಯಾಗಿದ್ದು ಸರ್ವತೋಮುಖ ಬೆಳವಣಿಗೆಗೆ ಸಾಧ್ಯವಾಗಿದೆ. ಶಿಕ್ಷಕರು ತಮ್ಮ ಶಿಕ್ಷಣ ವಿದ್ಯಾಲಯ ಮತ್ತು ಪಠ್ಯ ವಿಷಯದ ಬಗ್ಗೆ ಗೌರವವಿಟ್ಟು ಪ್ರತಿಯೊಬ್ಬವಿದ್ಯಾರ್ಥಿಗೂ ಮಹತ್ವ ನೀಡಿದಾಗ ವಿದ್ಯಾರ್ಥಿಯ ಬದುಕಿನ ಹಾದಿ ಸುಗಮವಾಗುತ್ತದೆ ಎಂದರು.

ಕ್ಯಾ. ಬೆಳ್ಳಾಲ ಗೋಪಿನಾಥ್ ಸ್ವಾಮಿ ವಿವೇಕಾನಂದರ ಬಗ್ಗೆ ಮತ್ತು ಶ್ರೀ ರಾಮಕೃಷ್ಣ ಆಶ್ರಮದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜೀಯವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್, ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ, ಶ್ರೀ. ಧ. ಮಂ. ವಸತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಇತರ ಅಂಗಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸಾಯಿಧೃತಿ ಸ್ವಾಮಿ ಅನುಪಮಾನಂದಜೀ ಯವರನ್ನು ಪರಿಚಯಿಸಿ, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ತೇಜಸ್ವಿನಿ ಕಾಯಕ್ರಮ ನಿರೂಪಿಸಿದರು.

Related posts

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya
error: Content is protected !!