September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

ಚಾರ್ಮಾಡಿ: ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿದ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳ ಸಂಬಂಧ ಮನೆಗೆ ಹೋಗಿ ವಾಪಸ್ ಬರುವಾಗ ಚೇತನ್ ಎಂಬಾತನ ಸಂಬಂಧಿಯ ಬೋಲೆರೋ ವಾಹನ ತೆಗೆದುಕೊಂಡು ಮೂಡಿಗೆರೆಗೆ ವಾಪಸ್ ಹೋಗುವಾಗ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದ ಕಾರಣದಿಂದ – ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ರಸ್ತೆಯ ಬದಿಯ ಕ್ರಾಂಕ್ರಿಟ್ ಚರಂಡಿಗೆ ಬಿದ್ದು ಸಿಲುಕಿಕೊಂಡಿದೆ.

ವಾಹನ ಪಲ್ಟಿ ರಭಸಕ್ಕೆ ವಾಹನದಲ್ಲಿದ್ದ ಮೂಡಿಗೆರೆಯ ಚೇತನ್ ಮತ್ತು ಸುರೇಶ್ ಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳೀಯ ಯುವಕರ ತಂಡ ಸೇರಿಕೊಂಡು ಬೊಲೆರೋ ವಾಹನವನ್ನು ಹೊರತೆಗೆದು ಸಹಕರಿಸಿದ್ದಾರೆ.

Related posts

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya
error: Content is protected !!