25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿವರದಿ

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ”ಯು ಜೂ.೧೬ರಂದು ಆಯೋಜಿಸಲಾಗಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು. ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂ.೧೬ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಆಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ರವರಿಗೆ ಸಲ್ಲಿಸುವುದು ಎಂದು ಮಂಗಳೂರು ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ (ಪ್ರಭಾರ), ಕುಮಾರಚಂದ್ರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!