24.2 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ನಡೆಯುವ ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದ ನೂತನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ದಿವ್ಯಶ್ರೀ ಸ್ವಸಹಾಯ ಸಂಘದ ಸದಸ್ಯರು ದೀಪ ಪ್ರಜ್ವಲಿಸುವುದರ ಮೂಲಕ ಒಕ್ಕೂಟ ಸಭೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ನಾರಾವಿ ವಲಯ ಜನಜಾಗ್ರತಿ ಸಮಿತಿಯ ಅಧ್ಯಕ್ಷ ನಿತ್ಯಾನಂದ ಎನ್. ನಾವರ, ಆಂತರಿಕ ಲೆಕ್ಕಪರಿಶೋಧಕ ಶೇಖರ, ಒಕ್ಕೂಟದ ಕಾರ್ಯದರ್ಶಿ ಎನ್. ವೀರೇಂದ್ರ ಕುಮಾರ್ ಜೈನ್, ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಳಿನಾಕ್ಷಿ, ಕೋಶಾಧಿಕಾರಿ ಹರೀಶ್ ಮೂಲ್ಯ, ಜನಜಾಗ್ರತಿ ಗ್ರಾಮ ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ಎನ್ ವಿಜಯ ಕುಮಾರ್ ಜೈನ್ ಮಾತನಾಡಿ ಜೂ.14ರಂದು ಅಳದಂಗಡಿಯಲ್ಲಿ ನಡೆಯುವ ಸರಕಾರಿ ಕೆಲಸದಿಂದ ನಿವೃತ್ತರಾಗಿರುವ ಶಿವಪ್ರಸಾದ್ ಅಜಿಲರ ಪೌರ ಸನ್ಮಾನದ ಬಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಿದ್ದಪ್ಪ ಮೂಲ್ಯ ಸ್ವಾಗತಿಸಿ, ವಂದಿಸಿದರು.

Related posts

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya
error: Content is protected !!