24.2 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

ಉಜಿರೆ: ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ೮ನೇ ತರಗತಿ ಹೊಸ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ದೀಪಪ್ರಜ್ವಲಿಸಿ, ಮಾತನಾಡಿ ವಿದ್ಯಾರ್ಥಿಗಳು ತಾಂತ್ರಿಕ ಜಗತ್ತಿಗೆ ಸಿಲುಕಿಕೊಂಡಿದ್ದಾರೆ, ಪೋಷಕರು ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಬೇಕು.

ವಿದ್ಯಾರ್ಥಿ ದಿಸೆಯಲ್ಲಿ ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳುವಂತೆ ಮಾಡುವುದು ಪ್ರಸ್ತುತ ಕಾಲಘಟ್ಟದಲ್ಲಿ ಅತಿ ಅಗತ್ಯ. ಈ ಶಿಕ್ಷಣವನ್ನು ರತ್ನಮಾನಸ ವಿದ್ಯಾರ್ಥಿ ನಿಲಯ ಹಲವಾರು ವರ್ಷಗಳಿಂದ ನೀಡುತ್ತ ಬಂದಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅನೇಕ ಕ್ಷೇತ್ರದಲ್ಲಿ ಜವಾಬ್ದಾರಿಯುತ ಹುದ್ದೆಯನ್ನು ಅಲಂಕರಿಸಿ, ಯಶಸ್ವಿಯಾಗಿರುವಂತಹ ನಿದರ್ಶನಗಳಿವೆ ಎಂದು ರತ್ನಮಾನಸದ ವಿದ್ಯಾರ್ಥಿಗಳು ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಸಂಸ್ಕೃತ ಉಪನ್ಯಾಸಕರಾದ ಡಾ/ ಪ್ರಸನ್ನ ಕುಮಾರ್ ಐತಾಳ್ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಮುಖ್ಯ ಅತಿಥಿ ಗುರುವಾಯನಕೆರೆ ಫ್ರೌಡಶಾಲೆಯ ರಾಜ್ಯ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ಮಾತನಾಡಿ ವ್ಯಕ್ತಿ ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರಬೇಕು. ಹಲವಾರು ಮಂದಿಗೆ ಉದ್ಯೋಗವನ್ನು ಕೊಡುವಂತಹ ಶಕ್ತಿಗಳಾಗಬೇಕು, ಅಂಕವೇ ಪ್ರಾದಾನ್ಯತೆ ಅಲ್ಲ ಉತ್ತಮ ನಡವಳಿಕೆ ಅತಿ ಅಗತ್ಯ ಎಂದರು.

ಶಿಸ್ತು, ಸಮಯಪಾಲನೆ, ಸಂಸ್ಕಾರವನ್ನು ರತ್ನಮಾನಸ ಕಲಿಸುತ್ತದೆ. ಕಲಿಕೆಯಲ್ಲಿ ಶ್ರದ್ಧೆ, ವಿನಯ, ತಾಳ್ಮೆ ಬಹಳ ಪ್ರಾಮುಖ್ಯವಾದವು. ಮಕ್ಕಳ ಕಲಿಕೆ ಉತ್ತಮವಾಗಬೇಕಾದರೆ ಪೋಷಕರ ಪಾತ್ರ ಅಮೂಲ್ಯವಾದದ್ದು ಎಂದು ಎಸ್‌ಡಿಎಂ ಡಿಎಡ್ ಕಾಲೇಜಿನ ಉಪನ್ಯಾಸಕ ಮಂಜು ಆರ್. ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಆರೋಗ್ಯ ಕೇಂದ್ರದ ಹಿರಿಯ ಪರಿವೀಕ್ಷಕ ಸೋಮನಾಥ್ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಅಧ್ಯಕ್ಷತೆಯನ್ನು ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕ ಯತೀಶ್ ಕೆ. ಬಳಂಜ ವಹಿಸಿದ್ದರು.
೮ನೇ ತರಗತಿಯ ವಿದ್ಯಾರ್ಥಿಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ 10ನೇ ತರಗತಿಯ ವಿದ್ಯಾರ್ಥಿಗಳು ಆರತಿಯನ್ನು ಬೆಳಗಿ ಹಣೆಗೆ ತಿಲಕವನ್ನು ಇಟ್ಟು, ಬರಮಾಡಿಕೊಂಡರು.

ವೇದಿಕೆಯಲ್ಲಿ ನಿಲಯದ ಸಿಬ್ಬಂದಿಗಳಾದ ದೀಪಕ್ ಹಾಗೂ ಉದಯ ಕುಮಾರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ನಿಶಿತ್ ಹಾಗೂ ರಾಕೇಶ್ ಡಿ ಆರ್ ಪ್ರಾರ್ಥಿಸಿ, ನಿಲಯದ ಅಧ್ಯಾಪಕರಾದ ರವಿಚಂದ್ರ ಸ್ವಾಗತಿಸಿದರು. ಉದಯರಾಜ್ ವಂದಿಸಿದರು. ವಿದ್ಯಾರ್ಥಿ ನಿಶಿತ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya
error: Content is protected !!