September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್.ಐ.ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್.ಐ.ಎ ಗೆ ನೀಡಿಲ್ಲಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಇಲ್ಲಿ ಕೇಂದ್ರ ಸರ್ಕಾರ ಕೊಲೆ ಪ್ರಕರಣದಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದೆ. ರಾಜಕೀಯ ದೃಷ್ಟಿಯಿಂದ ಕೊಲೆ ಪ್ರಕರಣವನ್ನು ನೋಡುತಿದೆ ಹೊರತು, ನಿಜವಾದ ನ್ಯಾಯ ಒದಗಿಸಲು ಕೇಂದ್ರ ಸರಕಾರ ಮುಂದಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಅಪಾದಿಸಿದ್ದಾರೆ.

ಕೊಲೆಯಾದವರಿಗೆ ನಿಜವಾದ ನ್ಯಾಯ ದೊರಕಿಸಬೇಕಾದರೆ ಕೇಂದ್ರ ಸರಕಾರ ಈ ತಾರತಮ್ಯದ ನೀತಿಯನ್ನು ಬಿಟ್ಟು ಪ್ರಾಮಾಣಿಕವಾದ ತನಿಖೆಗೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಕೇವಲ ಒಂದು ಪ್ರಕರಣವನ್ನು ನೀಡುವ ಮೂಲಕ ಕೇಂದ್ರ ಸರಕಾರ ಎಲ್ಲೋ ಜನರಲ್ಲಿ ಸಂಶಯ ಹಾಗೂ ತಪ್ಪು ಅಭಿಪ್ರಾಯವನ್ನು ಮೂಡಿಸುವ ಮೂಲಕ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ.

Related posts

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!