22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್.ಐ.ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್.ಐ.ಎ ಗೆ ನೀಡಿಲ್ಲಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಇಲ್ಲಿ ಕೇಂದ್ರ ಸರ್ಕಾರ ಕೊಲೆ ಪ್ರಕರಣದಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದೆ. ರಾಜಕೀಯ ದೃಷ್ಟಿಯಿಂದ ಕೊಲೆ ಪ್ರಕರಣವನ್ನು ನೋಡುತಿದೆ ಹೊರತು, ನಿಜವಾದ ನ್ಯಾಯ ಒದಗಿಸಲು ಕೇಂದ್ರ ಸರಕಾರ ಮುಂದಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಅಪಾದಿಸಿದ್ದಾರೆ.

ಕೊಲೆಯಾದವರಿಗೆ ನಿಜವಾದ ನ್ಯಾಯ ದೊರಕಿಸಬೇಕಾದರೆ ಕೇಂದ್ರ ಸರಕಾರ ಈ ತಾರತಮ್ಯದ ನೀತಿಯನ್ನು ಬಿಟ್ಟು ಪ್ರಾಮಾಣಿಕವಾದ ತನಿಖೆಗೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಕೇವಲ ಒಂದು ಪ್ರಕರಣವನ್ನು ನೀಡುವ ಮೂಲಕ ಕೇಂದ್ರ ಸರಕಾರ ಎಲ್ಲೋ ಜನರಲ್ಲಿ ಸಂಶಯ ಹಾಗೂ ತಪ್ಪು ಅಭಿಪ್ರಾಯವನ್ನು ಮೂಡಿಸುವ ಮೂಲಕ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ.

Related posts

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!